Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:6
32 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು.


ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.


ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.


ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು “ತಮ್ಮೂಜ್” ದೇವತೆಗಾಗಿ ಅಳುತ್ತಾ ಕುಳಿತಿದ್ದರು.


ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.


ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ನಾನು ದೇವಜನರ ಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು” ಎಂದು ಅಂದುಕೊಳ್ಳುವಿ.


ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,


ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.


ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.


ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.


ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.


ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.


ಆಮೇಲೆ ಆತನು ನನಗೆ, “ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ” ಎಂದು ಹೇಳಿದನು.


ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.


ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.


ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು