Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:9
34 ತಿಳಿವುಗಳ ಹೋಲಿಕೆ  

ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.


ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!


ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.


ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.


ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.


ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು