Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿಹೊಂದಿದನಂತರ ಯೆಹೋವನ ಸೇವಕನಾದ ಮೋಶೆಯು ನಿಮಗೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಬಹುದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ನಿಮ್ಮ ವಿಶ್ರಾಂತಿಗಾಗಿ ಒಂದು ಸ್ಥಳವನ್ನು ಕೊಟ್ಟಿದ್ದಾನೆ. ಯೆಹೋವನು ನಿಮ್ಮ ಸಹೋದರರಿಗಾಗಿಯೂ ಒಂದು ಸ್ಥಳವನ್ನು ಕೊಡುತ್ತಾನೆ. ಆದರೆ ನಿಮ್ಮ ದೇವರಾದ ಯೆಹೋವನು ಅವರಿಗೆ ಕೊಡುವ ದೇಶವನ್ನು ಅವರು ಪಡೆದುಕೊಳ್ಳುವವರೆಗೆ ನೀವು ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕು. ಆಮೇಲೆ ನೀವು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ನಿಮ್ಮ ದೇಶಕ್ಕೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ದೇಶವು ಅದೇ ಆಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:15
15 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.


ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ


ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.


ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.


ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.


ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.


ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು