Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:12
29 ತಿಳಿವುಗಳ ಹೋಲಿಕೆ  

ಹಾರಿ ಬರುವ ನಿನ್ನ ಬಾಣಗಳ ಬೆಳಕಿಗೆ, ಮಿಂಚುವ ನಿನ್ನ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.


ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.


ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.


ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‌ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು.


ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.


ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”


ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.


ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,


ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,


ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.


ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು.


ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.


ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.


ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.


ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.


ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,


ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು


ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.


ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.


ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.


ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು