Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನೀವು ಬಂದು ನನಗೆ ಸಹಾಯಮಾಡಿ, ನಾವು ಯೆಹೋಶುವನೊಂದಿಗೂ ಇಸ್ರಯೇಲರೊಂದಿಗೂ ಒಪ್ಪಂದ ಮಾಡಿಕೊಂಡು ಗಿಬ್ಯೋನ್ಯರನ್ನು ಸೋಲಿಸೋಣ,” ಎಂದು ಹೇಳಿಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಬಂದು ನನಗೆ ಸಹಾಯ ಮಾಡಿರಿ; ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆಮಾಡಿಕೊಂಡ ಗಿಬ್ಯೋನ್ಯರನ್ನು ಸೋಲಿಸೋಣ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನನ್ನೊಂದಿಗೆ ಬಂದು ಗಿಬ್ಯೋನಿನ ಮೇಲೆ ಧಾಳಿಮಾಡಲು ಸಹಾಯಮಾಡಿರಿ. ಗಿಬ್ಯೋನ್ ಯೆಹೋಶುವನೊಂದಿಗೂ ಇಸ್ರೇಲರೊಂದಿಗೂ ಶಾಂತಿಒಪ್ಪಂದ ಮಾಡಿಕೊಂಡಿದೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಗಿಬ್ಯೋನರು ಯೆಹೋಶುವನ ಮತ್ತು ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡದ್ದರಿಂದ ನಾವು ಅದನ್ನು ದಾಳಿಮಾಡುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:4
15 ತಿಳಿವುಗಳ ಹೋಲಿಕೆ  

ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.


ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.


ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.


ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು