Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಕಾದೇಶ್ ಬರ್ನೇಯದಿಂದ ಗಾಜಾ ಊರಿನ ವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೆಹೋಶುವನು ಕಾದೇಶ್‌ಬರ್ನೇಯದಿಂದ ಗಾಜಾದವರೆಗಿನ ಎಲ್ಲ ಪಟ್ಟಣಗಳನ್ನು ಗೆದ್ದುಕೊಂಡನು. ಅವನು ಈಜಿಪ್ಟಿನ ಗೋಷೆನ್ ಪ್ರಾಂತದಿಂದ ಗಿಬ್ಯೋನಿನವರೆಗೆ ಇದ್ದ ಎಲ್ಲ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:41
19 ತಿಳಿವುಗಳ ಹೋಲಿಕೆ  

ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.


ಗೋಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.


ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.


ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.


ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;


ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,


ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.


ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.


ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.


ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣದ ಕಡೆಯಲ್ಲಿರುವುದು. ಅಲ್ಲಿಂದ ಅದು ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.


ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.


ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.


ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.


ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು