Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ಯೆಹೋಶುವನು ಆ ಬೇರೆ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನೂ ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ, ಅವುಗಳ ಸಮಸ್ತ ಅರಸರನ್ನೂ ಹಿಡಿದು ಖಡ್ಗದಿಂದ ದಾಳಿಮಾಡಿ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:12
18 ತಿಳಿವುಗಳ ಹೋಲಿಕೆ  

ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.


ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.


ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.


ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.


ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.


ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.


ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.


ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.


ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.


ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.


ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.


ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ


ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು