Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಹೋಶುವನು ಇಸ್ರಯೇಲರ ಸಮೇತ, ಜೋರ್ಡನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಯೊರ್ದನ್ ಹೊಳೆಯ ಪಶ್ಚಿಮದಲ್ಲಿ ಲೆಬನೋನ್ ತಗ್ಗಿನಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರು ಜೋರ್ಡನ್ ನದಿಯ ಪಶ್ಚಿಮ ಪ್ರದೇಶದಲ್ಲಿದ್ದ ಅರಸರನ್ನು ಸಹ ಸೋಲಿಸಿದರು. ಈ ಪ್ರದೇಶದಲ್ಲಿ ಯೆಹೋಶುವನು ಜನರ ಮುಂದಾಳಾದನು. ಯೆಹೋಶುವನು ಈ ಪ್ರದೇಶವನ್ನು ಇಸ್ರೇಲಿನ ಹನ್ನೆರಡು ಕುಲಗಳಿಗೆ ಹಂಚಿದನು. ದೇವರು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ಪ್ರದೇಶವೇ ಅದಾಗಿತ್ತು. ಈ ಪ್ರದೇಶವು ಲೆಬನೋನ್ ಕಣಿವೆಯ ಬಾಲ್ಗಾದ್ ಮತ್ತು ಸೇಯೀರ್ ಹತ್ತಿರವಿದ್ದ ಹಾಲಾಕ್ ಬೆಟ್ಟದ ನಡುವೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋಶುವನು ಇಸ್ರಾಯೇಲರ ಸಮೇತ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶದ ಅರಸರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:7
16 ತಿಳಿವುಗಳ ಹೋಲಿಕೆ  

ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.


ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.


ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.


ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,


ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.


ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು