Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 ಅವು ಯಾವುವೆಂದರೆ - ಈಜಿಪ್ಟಿನ ಈಚೆಯಿರುವ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರ್, ಎಕ್ರೋನ್ ಎಂಬ ನಗರಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ಅವು ಯಾವವಂದರೆ - ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿದ್ದ ಉತ್ತರ ಮೇರೆಯಾದ ಎಕ್ರೋನಿನವರೆಗಿದ್ದು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಗೆಷೂರ ಪ್ರದೇಶವನ್ನು ಮತ್ತು ಫಿಲಿಷ್ಟಿಯರ ಪ್ರದೇಶವನ್ನು ಇನ್ನೂ ವಶಪಡಿಸಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಅವು ಯಾವುವೆಂದರೆ: “ಫಿಲಿಷ್ಟಿಯರ ಮತ್ತು ಗೆಷೂರ್ಯರ ದೇಶವೆಲ್ಲಾ ಅಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:2
15 ತಿಳಿವುಗಳ ಹೋಲಿಕೆ  

ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,


ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.


ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.


ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,


ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.


ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.


ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.


ಇವನ ರಾಜ್ಯ ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು.


ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.


ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು.


(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು