Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರು ಕತ್ತಿಗೆ ತುತ್ತಾಗಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನೂ ಆಗಿದ್ದ ಬಿಳಾಮನೂ ಸೇರಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನೂ ಆಗಿದ್ದ ಬಿಳಾಮನೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲರು ಬೆಯೋರನ ಮಗನಾದ ಬಿಳಾಮನನ್ನು ಕೊಂದರು. (ಬಿಳಾಮನು ಮಂತ್ರ ವಿದ್ಯೆಯಿಂದ ಭವಿಷ್ಯವನ್ನು ಹೇಳುತ್ತಿದ್ದನು.) ಯುದ್ಧದಲ್ಲಿ ಇಸ್ರೇಲರು ಬಹಳಷ್ಟು ಜನರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಇಸ್ರಾಯೇಲರು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮನೆಂಬ ಕಣಿ ಹೇಳುವವನನ್ನು ಖಡ್ಗದಿಂದ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:22
10 ತಿಳಿವುಗಳ ಹೋಲಿಕೆ  

ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.


ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’


ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.


ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು