Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೆಷ್ಬೋನಿನಿಂದ ರಾಮತ್ ಮಿಚ್ಫೆ, ಬೆಟೋನೀಮ್ ಎಂಬ ಊರುಗಳವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೇಬೀರ್ ಪ್ರಾಂತ್ಯದವರೆಗೆ ಇರುವ ನಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೆಷ್ಬೋನಿನಿಂದ ರಾಮತ್‍ಮಿಚ್ಪೆ, ಬೆಟೋನೀಮ್ ಎಂಬ ಊರುಗಳವರೆಗೂ ಇರುವ ಪ್ರದೇಶ, ಮಹನಯಿವಿುನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಪ್ರದೇಶವು ಹೆಷ್ಬೋನ್‌ನಿಂದ ರಾಮತ್‌ಮಿಚ್ಛೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೊನೀಮ್ ಎಂಬ ಊರುಗಳವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯವರೆಗೂ ಇರುವ ದೇಶವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:26
14 ತಿಳಿವುಗಳ ಹೋಲಿಕೆ  

ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು


ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ


ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.


ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.


ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,


ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.


ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು


ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,


ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.


ಮಹನಯಿಮಿನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು