Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮನಸ್ಸೆ ಕುಲದ ಅರ್ಧಜನರು, ರೂಬೇನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ತ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:8
11 ತಿಳಿವುಗಳ ಹೋಲಿಕೆ  

ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.


ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.


ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.


ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು.


ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.


ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.


ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.


ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;


ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು