Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:12
21 ತಿಳಿವುಗಳ ಹೋಲಿಕೆ  

ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.


ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.


ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.


ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.


ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.


ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.


ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.


ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು