Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲ್‍ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಹೊಂದಿಕೊಂಡದರಿಂದ ಹೆಬ್ರೋನ್ ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ನಗರ ಈಗಲೂ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನ ವಂಶದವರ ಸ್ವಾಸ್ತ್ಯವಾಗಿದೆ. ಏಕೆಂದರೆ ಅವನು ಇಸ್ರೇಲಿನ ದೇವರಾದ ಯೆಹೋವನನ್ನು ನಂಬಿದ್ದನು ಮತ್ತು ಆತನ ಆಜ್ಞೆಯನ್ನು ಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆಯೇ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ಹೆಬ್ರೋನು ಇಂದಿನವರೆಗೂ ಅವನ ಸೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:14
9 ತಿಳಿವುಗಳ ಹೋಲಿಕೆ  

ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.


ಯೆಹೂದ ಕುಲದ ಯೆಫುನ್ನೆಯನ ಮಗನಾದ ಕಾಲೇಬ್,


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.


ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಮಲ್ಕೀಯನು ಎತ್ನಿಯ ಮಗ, ಇವನು ಜೆರಹನ ಮಗ, ಜೆರಹನು ಅದಾಯನ ಮಗನು.


ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು