Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹಿಂದೆ ಆ ನಗರದ ಹೆಸರು ಕಿರ್ಯಾತ್ ಅರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ಆ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:15
16 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.


ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.


ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.


ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು.


ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.


ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.


ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.


ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.


ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,


ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.


ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.


ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು