Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಲ್ಲಿಂದ ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾಗುಡ್ಡದ ಮೇಲೆ ಯೆಬ್ನೇಲಿಗೆ ಹೋಗಿ ಸಮುದ್ರ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಲ್ಲಿಂದ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಲ್ಲಿಂದ ಆ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಆ ಗಡಿಯು ಯಬ್ನೇಲಿನವರೆಗೆ ಮುಂದುವರೆದು ನಂತರ ಮೆಡಿಟರೆನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೂ, ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯಬ್ನೆಯೇಲಿಗೆ ಹೊರಟು ಸಮುದ್ರ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:11
15 ತಿಳಿವುಗಳ ಹೋಲಿಕೆ  

ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.


ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.


ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.


ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.


ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮ ಪಟ್ಟಣಗಳು.


ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.


ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.


ಇಸ್ರಾಯೇಲರು ಯೆಹೂದ್ಯರು ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.


ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವುದು.


ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.


ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು