Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೆ ಅವರನ್ನು ದಾಸತ್ವಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಸ್ವಲ್ಪ ಕಾಲದ ನಂತರ ಇಸ್ರೇಲರು ಬಲಶಾಲಿಗಳಾಗಿ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಅವರನ್ನು ಅಲ್ಲಿಂದ ಹೊರಗಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಇಸ್ರಾಯೇಲರು ಬಲಗೊಂಡಾಗ, ಕಾನಾನ್ಯರನ್ನು ಹೊರಡಿಸದೆ ಅವರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:13
13 ತಿಳಿವುಗಳ ಹೋಲಿಕೆ  

ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.


ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.


ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.


ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು.


ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.


ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.


ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು