Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:1
26 ತಿಳಿವುಗಳ ಹೋಲಿಕೆ  

ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು.


ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.


“ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.


ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.


ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.


ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.


ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.


ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.


ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.


ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)


ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.


ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ.


ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.


ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.


ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.


ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.


ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,


ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.


ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.


ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.


ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು