Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ಎದೆಯೊಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಒಬ್ಬನಲ್ಲಿಯೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:11
27 ತಿಳಿವುಗಳ ಹೋಲಿಕೆ  

ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.


ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು.


ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,


ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.


ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.


ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.


ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.


ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.


ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!


ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.


ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು