Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:14
18 ತಿಳಿವುಗಳ ಹೋಲಿಕೆ  

ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು.


ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.


ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,


ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು.


ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.


ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.


ನನ್ನ ತಂದೆ ತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನು ನಾಶಮಾಡದೆ ಉಳಿಸುವುದಾಗಿ ಯೆಹೋವನ ಹೆಸರಿನಲ್ಲಿ ವಾಗ್ದಾನ ಮಾಡಬೇಕು ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ” ಎಂದಳು.


ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ


ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.


ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು


ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.


ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.


ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು