Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರಿಕೋವಿನ ಅರಸನು ರಾಹಾಬಳಿಗೆ - ನಿನ್ನ ಮನೆಯಲ್ಲಿಳುಕೊಂಡಿರುವ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡುವದಕ್ಕೆ ಬಂದವರು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:3
15 ತಿಳಿವುಗಳ ಹೋಲಿಕೆ  

ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.


ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.


ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.


ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?


ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.


ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಕೊಂಡು ಅವನ ಬಳಿಗೆ ತಂದರು.


“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ನಾವು ಅವನಿಗೆ, “ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.


ಜನರು ಯೆರಿಕೋವಿನ ಅರಸನಿಗೆ “ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು.


ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ.


ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.


ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು