Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯೆಹೋವನು ಇಸ್ರಾಯೇಲ್ಯರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಿಸಿಕೊಂಡು ಅದರಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:43
26 ತಿಳಿವುಗಳ ಹೋಲಿಕೆ  

ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.


ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.


ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.


ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.


ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ


ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.


ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.


ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.


ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು