Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:15
31 ತಿಳಿವುಗಳ ಹೋಲಿಕೆ  

ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ


ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.


ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.


ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.


ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು.


ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.


ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.


ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.


ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.


ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.


ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,


ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.


ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.


ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,


“ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ


ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.”


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.


“ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು