Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಸರ್ವೇಶ್ವರನ ದಾಸ ಮೋಶೆಯು ನಿಮಗೆ ಕೊಟ್ಟ ಧರ್ಮಶಾಸ್ತ್ರವನ್ನೂ ವಿಧಿಗಳನ್ನೂ ಜಾಗರೂಕತೆಯಿಂದ ಕೈಗೊಳ್ಳಿರಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾರ್ಗದಲ್ಲಿ ನಡೆಯಿರಿ; ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನೇ ನೆಚ್ಚಿಕೊಂಡು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ಅವರಿಗೆ ಸೇವೆ ಸಲ್ಲಿಸಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವಿಧಿಗಳನ್ನು ಜಾಗರೂಕತೆಯಿಂದ ಕೈಕೊಳ್ಳಿರಿ. ಹೀಗಿರಲಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನೇ ಹೊಂದಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಆತನನ್ನು ಸೇವಿಸಿರಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:5
50 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.


ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.


ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,


ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.


ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.


ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.


ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.


ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.


ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.


ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು