Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನೀವು ಬಹಳ ಆಸ್ತಿಯುಳ್ಳವರಾಗಿ ದನಕರು, ಬೆಳ್ಳಿಬಂಗಾರ, ಕಂಚು ಕಬ್ಬಿಣ, ವಸ್ತ್ರ ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ. ನೀವು ಶತ್ರುಗಳಿಂದ ಪಡೆದ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲುಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಬಹಳ ದನ, ಕುರಿ, ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ ಮೊದಲಾದ ವಸ್ತು ಸಮೃದ್ಧಿಯುಳ್ಳವರಾಗಿ ನಿಮ್ಮ ನಿವಾಸಗಳಿಗೆ ಹೋಗಿರಿ; ನೀವು ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು, “ನೀವು ಬಹಳ ಶ್ರೀಮಂತರಾಗಿದ್ದೀರಿ, ನಿಮ್ಮಲ್ಲಿ ಬಹಳ ಪಶುಗಳಿವೆ; ನಿಮ್ಮಲ್ಲಿ ಚಿನ್ನ, ಬೆಳ್ಳಿ ಮತ್ತು ಬೆಲೆಬಾಳುವ ರತ್ನಾಭರಣಗಳಿವೆ. ನಿಮ್ಮಲ್ಲಿ ಸುಂದರವಾದ ಅನೇಕ ಬಟ್ಟೆಗಳಿವೆ. ನೀವು ನಿಮ್ಮ ಶತ್ರುಗಳಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡಿದ್ದೀರಿ. ಈ ವಸ್ತುಗಳನ್ನು ನಿಮ್ಮ ಸಹೋದರರೊಂದಿಗೂ ಹಂಚಿಕೊಳ್ಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:8
12 ತಿಳಿವುಗಳ ಹೋಲಿಕೆ  

ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.


ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.


ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.


ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.


ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು.


ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು


ಪೂರ್ವ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ. ಇವರಿಗೆ ಗಿಲ್ಯಾದ್ ದೇಶದಲ್ಲಿ ಅನೇಕ ದನ ಕುರಿಹಿಂಡುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು