Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಸುತ್ತಣ ವಿರೋಧಿಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹುದಿನಗಳು ಗತಿಸಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಇಸ್ರಾಯೇಲರನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅವರಿಗೆ ವಿಶ್ರಾಂತಿಕೊಟ್ಟ ಬಹಳ ದಿವಸಗಳ ತರುವಾಯ ಯೆಹೋಶುವನ ದಿವಸಗಳು ಗತಿಸಿ ವೃದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:1
15 ತಿಳಿವುಗಳ ಹೋಲಿಕೆ  

ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.


ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.


ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.


ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.


ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.


ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,


ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.


ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು.


ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.


ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು