Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:16
16 ತಿಳಿವುಗಳ ಹೋಲಿಕೆ  

ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಯೆಹೋವನು ಇಸ್ರಾಯೇಲರನ್ನು ಹೊಡೆಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದ್ದರಿಂದ ಆತನು ಅವರನ್ನು ಅವರ ಪೂರ್ವಿಕರಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದುರಿಸಿಬಿಡುವನು.


ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.


ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.’”


ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.


ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:


ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.


ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ


ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು