Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆಯ ಧರ್ಮಶಾಸ್ತ್ರವನ್ನೂ ಎಲ್ಲಾ ವಿಧಿಗಳನ್ನೂ ಕೈಗೊಳ್ಳುವುದರಲ್ಲಿ ಸ್ಥಿರಚಿತ್ತದಿಂದಿರಿ. ಎಡಕ್ಕಾಗಲಿ ಬಲಕ್ಕಾಗಲಿ ಓರೆಯಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ; ಎಡಕ್ಕಾದರೂ ಬಲಕ್ಕಾದರೂ ಓರೆಯಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:6
14 ತಿಳಿವುಗಳ ಹೋಲಿಕೆ  

ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.


ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.


ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.


ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು