Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರುವದರಿಂದ ನೀವು ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿರ್ರಿ; ಆತನನ್ನು ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ; ಯೆಹೋವನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:14
34 ತಿಳಿವುಗಳ ಹೋಲಿಕೆ  

ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.


“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.


ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.


ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು