Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 (ಆಗ ಸುಗ್ಗಿಕಾಲವಾದ್ದರಿಂದ ಜೋರ್ಡನ್ ನದಿಯು ದಡಮೀರಿ ಹರಿಯುತ್ತಿತ್ತು.) ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ತೀರಕ್ಕೆ ಬಂದರು. ಅವರು ನೀರಿನಲ್ಲಿ ಹೆಜ್ಜೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:15
12 ತಿಳಿವುಗಳ ಹೋಲಿಕೆ  

ಯೊರ್ದನ್ ನದಿಯು ಮೊದಲನೆಯ ತಿಂಗಳಿನಲ್ಲಿ ದಡ ತುಂಬಿ ಹರಿಯುತ್ತಿರುವಾಗ, ಇವರು ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಮತ್ತು ಪಶ್ಚಿಮ ಪ್ರದೇಶದಲ್ಲಿರವ ಎಲ್ಲರನ್ನೂ ಓಡಿಸಿಬಿಟ್ಟರು.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?


ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.


ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.


ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.


ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ಬೆನ್ಯಾಮೀನ್ ಮತ್ತು ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು