Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದರಿಂದ ಭೂನಿವಾಸಿಗಳೆಲ್ಲರು ಸರ್ವೇಶ್ವರನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಈ ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:24
24 ತಿಳಿವುಗಳ ಹೋಲಿಕೆ  

ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.


ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.


ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.


ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.


ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.


ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಭೂಮಿಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು