Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಮನುಷ್ಯನು - ನಾನು ಅಂಥವನಲ್ಲ; ಯೆಹೋವನ ಸೇನಾಪತಿಯು; ಈಗಲೇ ಬಂದಿದ್ದೇನೆ ಎಂದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ಸ್ವಾವಿುಯವರು ತಮ್ಮ ಸೇವಕನಿಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:14
35 ತಿಳಿವುಗಳ ಹೋಲಿಕೆ  

ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,


“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.


ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.


“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.


ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.


ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.


ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು?


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.


ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.


ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.


ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.


ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.


ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.


ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.


ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.


ಯೆಹೋವನು ಯೆಹೋಶುವನನ್ನು ಕುರಿತು,


ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.


ಕರ್ತನೇ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ನಾನು ಇನ್ನೇನು ಹೇಳಲಿ?


ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು