Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ಯೆಹೋಶುವನು ಸುನ್ನತಿ ಮಾಡುವುದಕ್ಕೆ ಕಾರಣ ಏನೆಂದರೆ - ಈಜಿಪ್ಟಿನಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು, ಅನಂತರ ಅರಣ್ಯದಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋಶುವನು ಸುನ್ನತಿಮಾಡಿದ್ದಕ್ಕೆ ಕಾರಣವೇನಂದರೆ - ಐಗುಪ್ತದಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲಾ ಆ ದೇಶವನ್ನು ಬಿಟ್ಟನಂತರ ಅರಣ್ಯದಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4-7 ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋಶುವನು ಸುನ್ನತಿ ಮಾಡಿದ ಕಾರಣವೇನೆಂದರೆ: ಈಜಿಪ್ಟಿನಿಂದ ಹೊರಟ ಗಂಡಸರಲ್ಲಿ ಯುದ್ಧಮಾಡುವ ಸೈನ್ಯದವರೆಲ್ಲರೂ ಮರುಭೂಮಿಯ ಮಾರ್ಗದಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:4
8 ತಿಳಿವುಗಳ ಹೋಲಿಕೆ  

ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.


ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.


ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.


ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು