Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:6
20 ತಿಳಿವುಗಳ ಹೋಲಿಕೆ  

ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.


ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.


ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.


ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.


“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.


ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.


ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.


ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.


ಆದುದರಿಂದ ಅವರ ಪೂರ್ವಿಕರಿಗೆ ಪ್ರತಿಯಾಗಿ ಹುಟ್ಟಿದ ಗಂಡು ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿಮಾಡಿರಲಿಲ್ಲ. ಆದುದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.


ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,


ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.


ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು