Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಯೆಹೋಶುವನಿಗೆ - ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲೆಂಬ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:9
21 ತಿಳಿವುಗಳ ಹೋಲಿಕೆ  

ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.


ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.


“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.


ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


“ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.


ನನ್ನ ಅವಮಾನವನ್ನು ತೊಲಗಿಸು, ಅದಕ್ಕೋಸ್ಕರ ಅಂಜುತ್ತಿದ್ದೇನೆ. ನಿನ್ನ ಕಟ್ಟಳೆಗಳು ಹಿತಕರವಾಗಿವೆ.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.


ಸುನ್ನತಿಯಾದ ಮೇಲೆ ಆ ಜನರು ವಾಸಿಯಾಗುವ ತನಕ ತಮ್ಮ ತಮ್ಮ ಪಾಳೆಯಗಳಲ್ಲಿಯೇ ಇದ್ದರು.


ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.


ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.


ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.


ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.


ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು