Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಪಟ್ಟಣದಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಹುಡುಗರನ್ನೂ ಮುದುಕರನ್ನೂ ದನಕುರಿಕತ್ತೆಗಳನ್ನೂ ನಿಶ್ಶೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು, ತರುಣಿಯರನ್ನು, ವೃದ್ಧೆಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:21
20 ತಿಳಿವುಗಳ ಹೋಲಿಕೆ  

ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.


ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.


ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.


ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.


ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.


ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.


ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು


ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು