Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದೇ ಸಮಯಕ್ಕೆ ಯೆಹೋಶುವನು ಇಸ್ರಯೇಲರಿಂದ ಪ್ರಮಾಣ ಮಾಡಿಸಿ ಅವರಿಗೆ, “ಜೆರಿಕೋ ಎಂಬ ಈ ನಗರವನ್ನು ಕಟ್ಟುವುದಕ್ಕೆ ಕೈಹಾಕುವವನು ಸರ್ವೇಶ್ವರನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ! ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ - ಈ ಯೆರಿಕೋ ಪಟ್ಟಣವನ್ನು ಕಟ್ಟುವದಕ್ಕೆ ಕೈ ಹಚ್ಚುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರೀ ಮಗನನ್ನೂ ಬಾಗಲುಗಳನ್ನಿಡುವಾಗ ಕಿರೀ ಮಗನನ್ನೂ ಕಳೆದುಕೊಳ್ಳಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:26
9 ತಿಳಿವುಗಳ ಹೋಲಿಕೆ  

ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.


ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.


ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.


ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.


ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.


ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.


ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು