Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರಸ್ವಾಮಿ ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ನಾಡಿನಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ಯೆಹೋಶುವನ ಸಂಗಡ ಇದ್ದದರಿಂದ ಅವನು ದೇಶದಲ್ಲೆಲ್ಲಾ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ಯೆಹೋಶುವನ ಸಂಗಡ ಇದ್ದನು. ಯೆಹೋಶುವನು ದೇಶದಲ್ಲೆಲ್ಲಾ ಸುಪ್ರಸಿದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:27
22 ತಿಳಿವುಗಳ ಹೋಲಿಕೆ  

ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.


ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.


ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ


ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.


ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.


ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.


ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.


ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.


ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು