Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:4
33 ತಿಳಿವುಗಳ ಹೋಲಿಕೆ  

ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.


ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.


ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.


ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.


ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.


ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.


ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.


ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.


ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.


ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.


ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.


ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.


ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.


ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.


ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ನಿನ್ನ ಭಟರೆಲ್ಲ ಆರು ದಿನಗಳ ವರೆಗೆ ದಿನಕ್ಕೆ ಒಂದು ಸಾರಿ ಪಟ್ಟಣವನ್ನು ಸುತ್ತಲಿ.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.


ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.


ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು