Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅಲ್ಲಿ ಯೆಹೋಶುವನು ಅವನಿಗೆ - ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನೂ ಕಲ್ಲೆಸೆದು ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:25
23 ತಿಳಿವುಗಳ ಹೋಲಿಕೆ  

ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.


ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯನ ಮಗನು.


ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.


“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.


ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.


ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.


ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.


ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.


ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.


ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.


ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.


ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು