Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಂದ ಬಳಿಕ ಯೆಹೋಶುವನಿಗೆ, “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ, ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಆ ನಗರವನ್ನು ಜಯಿಸಬಹುದು. ಎಲ್ಲರನ್ನು ಕಳುಹಿಸಿ ಸುಮ್ಮನೆ ದಣಿಸುವುದೇಕೆ? ಅಲ್ಲಿ ಸ್ವಲ್ಪಮಂದಿ ಮಾತ್ರ ಇದ್ದಾರೆ,” ಎಂದು ವರದಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತರುವಾಯ ಆ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧ ಮಾಡಲು ಎರಡು ಅಥವಾ ಮೂರುಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:3
9 ತಿಳಿವುಗಳ ಹೋಲಿಕೆ  

ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.


ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,


ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.


ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.


ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.


ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,


ಅದರಂತೆ ಸುಮಾರು ಮೂರು ಸಾವಿರ ಮಂದಿ ಯುದ್ಧಕ್ಕೆ ಹೋದರು. ಆದರೆ ಅವರು ಆಯಿ ಊರಿನವರ ಎದುರಿನಿಂದ ಓಡಿ ಹೋಗಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು