Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರಂತೆ ಸುಮಾರು ಮೂರು ಸಾವಿರ ಮಂದಿ ಯುದ್ಧಕ್ಕೆ ಹೋದರು. ಆದರೆ ಅವರು ಆಯಿ ಊರಿನವರ ಎದುರಿನಿಂದ ಓಡಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದರಂತೆಯೇ ಸುಮಾರು ಮೂರುಸಾವಿರ ಮಂದಿ ಹೋದರು. ಆದರೆ ಅವರು ಆಯಿ ಎಂಬ ಊರಿನವರನ್ನು ಎದುರಿಸಲಾಗದೆ ಓಡಿಬರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದರಂತೆ ಸುಮಾರು ಮೂರು ಸಾವಿರ ಮಂದಿ ಹೋದರು. ಆದರೆ ಅವರು ಆಯಿ ಎಂಬ ಊರಿನವರ ಎದುರಿನಿಂದ ಓಡಿ ಬರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4-5 ಸುಮಾರು ಮೂರು ಸಾವಿರ ಜನರು “ಆಯಿ”ಗೆ ಹೋದರು. ಆದರೆ “ಆಯಿ”ಯ ಜನರು ಇಸ್ರೇಲಿನ ಸುಮಾರು ಮೂವತ್ತಾರು ಜನರನ್ನು ಕೊಂದು ಹಾಕಿದರು. ಆದ್ದರಿಂದ ಇಸ್ರೇಲಿನ ಜನರು ಓಡಿಹೋದರು. “ಆಯಿ”ಯ ಜನರು ಅವರನ್ನು ಪಟ್ಟಣದ ದ್ವಾರದಿಂದ ಕಲ್ಲುಗಣಿಗಳವರೆಗೆ ಬೆನ್ನಟ್ಟಿಕೊಂಡು ಬಂದರು. “ಆಯಿ”ಯ ಜನರು ಅವರನ್ನು ಚೆನ್ನಾಗಿ ಥಳಿಸಿದರು. ಆಗ ಇಸ್ರೇಲರು ತುಂಬ ಭಯಗೊಂಡು ಧೈರ್ಯವನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಜನರಲ್ಲಿ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಅಲ್ಲಿಗೆ ಹೋದರು. ಆದರೆ ಅವರು ಆಯಿ ಎಂಬ ಪಟ್ಟಣದ ಮನುಷ್ಯರನ್ನು ಎದುರಿಸಲಾಗದೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:4
7 ತಿಳಿವುಗಳ ಹೋಲಿಕೆ  

ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.


ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”


ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?


ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.


ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು