Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಜನರು ಅದರ ಮೇಲೆ ಸರ್ವೇಶ್ವರನಿಗೆ ದಹನ ಹೋಮಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:31
16 ತಿಳಿವುಗಳ ಹೋಲಿಕೆ  

ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.


ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.


ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.


ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?


ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


ಆದರೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.


ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು” ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.


ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು