Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:33
22 ತಿಳಿವುಗಳ ಹೋಲಿಕೆ  

ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.


ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.


“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.


ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,


ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,


ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”


ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಎಂದನು.


ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ.


ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.


ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.


ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.


ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.


ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.


ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು