Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಭೆಯ ನಾಯಕರು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣ ಮಾಡಿದ್ದರಿಂದ ಇಸ್ರಯೇಲರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರುತಮ್ಮ ನಾಯಕರಿಗೆ ವಿರುದ್ಧ ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಮೂಹಪ್ರಧಾನರು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಹೊಡೆಯಲಿಲ್ಲ. ಆದರೆ ಸಮೂಹದವರೆಲ್ಲಾ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದ್ದರಿಂದ ಇಸ್ರಾಯೇಲರು ಅವರ ಮೇಲೆ ದಾಳಿಮಾಡಲಿಲ್ಲ. ಆದರೆ ಇಸ್ರಾಯೇಲರೆಲ್ಲರೂ ಪ್ರಧಾನರಿಗೆ ವಿರೋಧವಾಗಿ ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:18
11 ತಿಳಿವುಗಳ ಹೋಲಿಕೆ  

ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?


ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.


ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.


“ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ


ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;


ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.


ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು