Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಒಂದು ಉಪಾಯವನ್ನು ಹೂಡಿದರು. ಅದೇನೆಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿತಟ್ಟುಗಳನ್ನು ಹಾಕಿ ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೇಗಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣೀತಟ್ಟುಗಳನ್ನು ಹಾಕಿ, ಅವುಗಳ ಮೇಲೆ ಹರಿದುಹೋಗಿ ಕಟ್ಟಲ್ಪಟ್ಟಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಒಂದು ಉಪಾಯಮಾಡಿದರು. ಅವರು ಹರುಕು-ಮುರುಕಾದ ಹಳೆಯ ದ್ರಾಕ್ಷಾರಸದ ಬುದ್ದಲಿಗಳನ್ನು ತಮ್ಮ ಕತ್ತೆಗಳ ಬೆನ್ನ ಮೇಲೆ ಹೇರಿಸಿದರು; ತಾವು ಬಹುದೂರ ಪ್ರಯಾಣ ಮಾಡಿ ಬಂದಿರುವುದಾಗಿ ತೋರಿಸಲು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿಚೀಲಗಳನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ, ಅವರು ರಾಯಭಾರಿಗಳ ಹಾಗೆ ತೋರಿಸುವಂತೆ ಹಳೆಯ ಗೋಣಿ ಚೀಲಗಳನ್ನೂ ತೇಪೆ ಹಾಕಿದ ಹಳೆಯದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು, ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:4
12 ತಿಳಿವುಗಳ ಹೋಲಿಕೆ  

ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.


ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.


ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.


ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.


ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು


ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.


ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.


ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು