Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವನು ಯೆಹೋವನ ಸನ್ನಿಧಿಯಿಂದ ಓಡಿಬಂದವನು ಎಂಬದನ್ನು ಅವನು ಮೊದಲು ಹೇಳಿದ ಒಂದು ಮಾತಿನಿಂದ ಆ ಜನರು ತಿಳುಕೊಂಡಿದ್ದರು. ಈಗ ಇದನ್ನೂ ಕೇಳಿ ಬಹಳವಾಗಿ ಹೆದರಿ - ಇದೇನು ನೀನು ಮಾಡಿದ್ದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:10
8 ತಿಳಿವುಗಳ ಹೋಲಿಕೆ  

ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.


ಆ ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು.


ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,


ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.


ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ “ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?” ಎಂದು ಕೇಳಿದರು.


ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು