Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನಾದರೋ ಸ್ತೋತ್ರಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:9
24 ತಿಳಿವುಗಳ ಹೋಲಿಕೆ  

ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.


ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.


ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.


ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.


ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು