Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ದೇವರಾದ ಯೆಹೋವನು ಯೋನನ ಮೇಲ್ಗಡೆ ಒಂದು ಸೋರೆಗಿಡವು ಹಬ್ಬಿ ಅವನ ತಲೆಗೆ ನೆರಳಾಗಿ ಅವನ ಕರಕರೆಯನ್ನು ತಪ್ಪಿಸುವಂತೆ ಏರ್ಪಡಿಸಿದನು. ಆ ಸೋರೆಗಿಡದಿಂದ ಯೋನನಿಗೆ ಬಹು ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರಾದ ಯೆಹೋವನು ಒಂದು ಸೋರೆ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರದಲ್ಲಿ ಬೆಳೆಯ ಮಾಡಿದನು. ಆ ಸೋರೆ ಗಿಡವು ಆ ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:6
11 ತಿಳಿವುಗಳ ಹೋಲಿಕೆ  

ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ,


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.


ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.


ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.


ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.


ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು.


ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು.


ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು