Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:8
23 ತಿಳಿವುಗಳ ಹೋಲಿಕೆ  

ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.


ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.


ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.


ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.


ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.


ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


“ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು